ಮಂಡ್ಯ:
ಒಂಟಿಯಾಗಿ ವಾಸವಿದ್ದ ವೃದ್ದೆಯ ಮನೆ ಬಾಗಿಲು ಮುರಿದು ಮನೆಗೆ ನುಗ್ಗಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಪ್ರಕರಣ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಕರಿಕ್ಯಾತನಹಳ್ಳಿಯಲ್ಲಿ ನಡೆದಿದೆ.
![](https://assets-news-bcdn.dailyhunt.in/cmd/resize/400x400_80/fetchdata16/images/47/d4/88/47d488fab79f83f55ecb888fb8c0b79f04151edec207913261fd57b7eec1a8ba.jpg)
ತಡರಾತ್ರಿ ಮನೆಯ ಮುಂಬಾಗಿಲು ಒಡೆದು ಒಳಗೆ ನುಗ್ಗಿದ್ದ ದುಷ್ಕರ್ಮಿಗಳು, ವೃದ್ಧೆಯನ್ನು ಕೊಂದು ಮೈಮೇಲಿದ್ದ ಮಾಂಗಲ್ಯ ಸರ, ಓಲೆ, ಉಂಗುರ ಹಾಗೂ ಮಾಟಿ ಸೇರಿದಂತೆ ಸುಮಾರು 75 ಗ್ರಾಂಗಳಿಗೂ ಹೆಚ್ಚು ತೂಕದ ಆಭರಣವನ್ನು ಕಳವು ಮಾಡಿದ್ದಾರೆ.
ಊರಿನ ಜನರು ಈ ಕೊಲೆಯಿಂದಾಗಿ ಆತಂಕಕ್ಕೊಳಗಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/old-lady-death-mandya.jpg)