ಹೈದರಾಬಾದ್ :
ದೇಶಾದ್ಯಂತ ಮಾರಕ ಕೊರೊನಾ ಸೋಂಕು ಜನತೆಯಲ್ಲಿ ಆತಂಕ ತರಿಸಿದ್ದು, ದಿನೇದಿನೇ ಮಾರಕ ಸೋಂಕು ಹರಡುತ್ತಲೇ ಇದೆ. ಏತನ್ಮಧ್ಯೆ, ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ವಿಜಯವಾಡ ಮೂಲದ 55 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ.
ಈ ವ್ಯಕ್ತಿ ದೆಹಲಿಯಿಂದ ವಾಪಾಸ್ ಆಗಿದ್ದರು ಎನ್ನಲಾಗಿದ್ದು, ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಮಾ.30 ರಂದು ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ಐಸೋಲೇಷನ್ ನಲ್ಲಿ ಇರಿಸಲಾಗಿತ್ತು. ನಂತರ ರಕ್ತದ ಸ್ಯಾಂಪಲ್ ಹಾಗೂ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಈ ವೇಳೆ, ಕೊರೊನಾ ಸೋಂಕು ಪಾಸಿಟಿವ್ ಎಂದು ವರದಿ ಬಂದಿತ್ತು. ಆದರೆ, ಇಂದು ಈತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
