ಅಯೋಧ್ಯೆ ವಿವಾದ: ಇಂದು ಸುಪ್ರೀಂಕೋರ್ಟ್​​ನಲ್ಲಿ ಪ್ರಕರಣದ ವಿಚಾರಣೆ ದಿನಾಂಕ ನಿಗದಿ ಸಾಧ್ಯತೆ

ನವದೆಹಲಿ: 

    ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್​ ನೇತೃತ್ವದ ಐವರ ಸದಸ್ಯರ ಪೀಠ ಇಂದು​ ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಪ್ರಕರಣದ ಅರ್ಜಿಗಳ ವಿಚಾರಣೆ ದಿನಾಂಕ ನಿಗದಿ ಮಾಡಲಿದೆ. ಇದರ ಜೊತೆಗೆ ಪ್ರಕರಣದ ವಿಚಾರಣೆಗೆ ಎಷ್ಟು ಸಮಯ ಮೀಸಲಿಡಬೇಕು ಎಂಬ ಬಗ್ಗೆಯೂ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

   ಲೋಕಸಭಾ ಚುನಾವಣೆ ಸಮೀಪಸುತ್ತಿದೆ. ಈ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬುದು ಕೆಲವರ ಆಶಯ. ಈ ಮೂಲಕ ಚುನಾವಣೆಗೂ ಮೊದಲೇ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಬೇಕು ಎನ್ನುತ್ತಾರೆ ಕೆಲವರು. ಈ ಪ್ರಕರಣ ತ್ವರಿತ ವಿಚಾರಣೆ ಸಾಧ್ಯವಿಲ್ಲ ಎಂದು ಕೋರ್ಟ್​​ ಹೇಳಿದ ಮೇಲೆ ಸುಗ್ರೀವಾಜ್ಞೆಯ ಕೂಗು ಹೆಚ್ಚಿದೆ. ಇತ್ತೀಚೆಗೆ ರಂಜನ್​ ಅವರು ಪ್ರಕರಣದ ವಿಚಾರಣೆಗೆ ಐವರು ಸದಸ್ಯರ ಪೀಠ ರಚನೆ ಮಾಡಿದ್ದರು.

  ಇನ್ನು, ಈ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಸುಪ್ರೀಂಕೋರ್ಟ್​ ಆದೇಶ ನೀಡುವವ ವರೆಗೂ ನಾವು ಯಾವುದೇ ನಿರ್ಧಾರಕ್ಕೂ ಬರುವುದಿಲ್ಲ. ಸುಪ್ರೀಂ ತೀರ್ಪಿನಂತೆ ನಾವು ನಡೆಯುತ್ತೇವೆ,” ಎಂದು ಅವರು ಹೇಳಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap