ಬೆಂಗಳೂರು:  ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್

ಬೆಂಗಳೂರು: 

  ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ರೌಡಿಶೀಟರ್‌ಗಳ ಮೇಲೆ ಜಾಲಹಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.   ಆರೋಪಿಗಳಾದ ವಿಜಯ್ ದಡಿಯಾ ವಿಜಿ ಹಾಗು ಮೋರಿ ಅನಿ ಮೇಲೆ ಜಾಲಹಳ್ಳಿ ಇನ್ಸ್‌ಪೆಕ್ಟರ್‌ಗಳಾದ ಯಶವಂತ್ ಹಾಗೂ ಪಿಎಸ್‍ಐ ಲೇಪಾಕ್ಷಿ ಫೈರಿಂಗ್ ನಡೆಸಿದ್ದಾರೆ.

  ದಡಿಯಾ ವಿಜಿ ನಂದಿನಿ ಲೇಔಟ್‍ನ ರೌಡಿಶೀಟರ್ ಆಗಿದ್ದು, ಸುಮಾರು 15 ಪ್ರಕರಣದಲ್ಲಿ ಭಾಗಿಯಾಗಿದ್ದನು. ಅಲ್ಲದೆ ಇಬ್ಬರು ಹಲವು ಪ್ರಕರಣದಲ್ಲಿ ಬೇಕಾಗಿದ್ದರು. ಕಳೆದ ವಾರ ವಿಜಿ ಹಾಗೂ ಅನಿ ಸರಗಳ್ಳತನ ಮಾಡಿದ್ದರು. ಅಲ್ಲದೆ ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಜಾಲಹಳ್ಳಿ ಇನ್ಸ್​ಪೆಕ್ಟರ್ ಯಶವಂತ್ ತಂಡ ನಂದಿನಿ ಲೇಔಟ್​ನ ಕೂಲಿನಗರದಲ್ಲಿ ಈ ಇಬ್ಬರು ಆರೋಪಿಗಳು ಅಡಗಿ ಕೂತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ ಮತ್ತು ನರೇಶ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ.

ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್​ ಯಶವಂತ್ ಮತ್ತು ಪಿಎಸ್​ಐ ಲೇಪಾಕ್ಷಿ ಫೈರಿಂಗ್ ನಡೆಸಿದ್ದಾರೆ. ಬಳಿಕ ವಿಜಿ ಹಾಗೂ ಅನಿ ಯನ್ನು ಬಂಧಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇತ್ತ ಪೊಲೀಸ್ ಸಿಬ್ಬಂದಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ