ಇಂದು ಅಂಬರೀಶ್​ ಸಮಾಧಿಗೆ ಸುಮಲತಾ ಭೇಟಿ

ಬೆಂಗಳೂರು: 

   ಮಂಡ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಸುಮಲತಾ ಅಂಬರೀಶ್​ ಗೆಲುವು ಸಾಧಿಸಿದ್ದಾರೆ. ಇಂದು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್​ ಸಮಾಧಿಗೆ ಭೇಟಿ ನೀಡಲಿದ್ದಾರೆ.

   ಇಂದು ಅಂಬರೀಶ್ ಅವರ  6ನೇ ತಿಂಗಳ ಪುಣ್ಯ ತಿಥಿ. ಇದಕ್ಕೆ ಜಯದ ಉಡುಗೊರೆ ಸಿಕ್ಕಿದೆ. ಹಾಗಾಗಿ ಇಂದು ಅಂಬರೀಶ್​ ಸಮಾಧಿಗೆ ಬೆಳಗ್ಗೆ 10 ಗಂಟೆಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.  ನಿನ್ನೆ ಮಧ್ಯ ರಾತ್ರಿಯಿಂದಲೇ ಪೂಜೆಗೆ ಪೂರ್ವ ಸಿದ್ಧತೆ ನಡೆಸಲಾಗಿತ್ತು. ಸಮಾಧಿಗೆ ಅಲ್ಲಿನ ಸಿಬ್ಬಂದಿ ಅಲಂಕಾರ ಮಾಡಿದ್ದರು.

   ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಮಗ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಸುಮಲತಾ 1.30 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.  ಸುಮಲತಾ ಗೆಲುವಿನಲ್ಲಿ ದರ್ಶನ್​-ಯಶ್​ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಇಂದು ಅವರು ಕೂಡ ಸಮಾಧಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಗೆಲುವಿನ ಬಗ್ಗೆ ದರ್ಶನ್​ ಹಾಗೂ ರಾಕ್​ಲೈನ್​ ವೆಂಕಟೇಶ್​ ಮಾತನಾಡಿದ್ದು, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link