ಬೆಂಗಳೂರು :
ಇಷ್ಟು ದಿನ ಅತೃಪ್ತ ಶಾಸಕರಿಗೂ ನಮಗೂ ಸಂಪರ್ಕವೇ ಇಲ್ಲ ಎಂದಿದ್ದ ಬಿಜೆಪಿ ಇದೀಗ ಇನ್ನು 3 ಶಾಸಕರು ಬಿಜೆಪಿ ಸೇರ್ತಾರೆ ಎನ್ನುವ ಮೂಲಕ ದೋಸ್ತಿಗೆ ಶಾಕ್ ನೀಡಿ ಬಿಜೆಪಿ ಹೊಸ ಬಾಂಬ್ ಸಿಡಿಸಿದೆ.
ಹೀಗಾಗಿ ಹೊಸ ಉತ್ಸಾಹದಲ್ಲಿ ಸರ್ಕಾರ ರಚನೆವರೆಗೂ ಪ್ಲ್ಯಾನ್ ಮಾಡುತ್ತಿರುವ ಬಿಜೆಪಿ ನಾಯಕರು, ಇಷ್ಟು ದಿನಗಳ ಕಾಲ ಅತೃಪ್ತರು ನಮ್ಮ ಸಂಪರ್ಕದಲ್ಲಿಲ್ಲ ಎಂಬ ಹೇಳಿಕೆ ಬಿಟ್ಟು ಈಗ ರಾಜಾರೋಶವಾಗಿ ಆಫರೇಶನ್ ಕಮಲ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ನಮ್ಮ ಸಂಪರ್ಕದಲ್ಲಿ 17 ಶಾಸಕರಿದ್ದಾರೆ. ಇದು ಇನ್ನೂ 3 ಶಾಸಕರು ಬಿಜೆಪಿ ಸೇರ್ತಾರೆ ಎನ್ನುವ ಮೂಲಕ ಬಿಎಸ್ವೈ ಹೊಸ ಬಾಂಬ್ ಸಿಡಿಸಿದ್ದಾರೆ. ಅಷ್ಟೇ ಅಲ್ಲ ವಿಶ್ವಾಸಮತ ಯಾಚನೆಯಂದೂ ಕುಮಾರಸ್ವಾಮಿ ಸೋಲುತ್ತಾರೆ ಎಂದು ಬಿಎಸ್ವೈ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/yeddyurappa.gif)