ಬೆಂಗಳೂರು :
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಖಂಡಿಸಿ ಫೆ.19ರಂದು ವಾಟಾಳ್ ನಾಗರಾಜ್ ಬಂದ್ಗೆ ಕರೆ ನೀಡಿದ್ದರು. ಆದರೆ, ಈಗ ಅವರು ಬಂದ್ ದಿನಾಂಕ ಮುಂದೂಡಿದ್ದಾರೆ. ಕರ್ನಾಟಕ ಬಂದ್ ಬದಲಾಗಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ನೀಡಿದ್ದವು. ಆದರೆ, ಕುಂಭಮೇಳ, ಏರ್ಶೋ, ಮಹಾಮಸ್ತಕಾಭಿಷೇಕ ನಡೆಯಲಿದೆ. ಹಾಗಾಗಿ, ಬಂದ್ ದಿನಾಂಕವನ್ನು ಅವರು ಮುಂದೂಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ 19ರಂದು ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ಈಗಾಗಲೇ ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಬಂದ್ಗೆ ಬೆಂಬಲ ಸೂಚಿಸಿದ್ದವು. ಹಾಗಾಗಿ ಸರ್ಕಾರಿ ಬಸ್ಗಳು ರಸ್ತೆಗೆ ಇಳಿಯುವುದು ಅನುಮಾನ ಎನ್ನಲಾಗಿತ್ತು. ಕೈಗಾರಿಕಾ ಸಂಘಟನೆಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನೌಕರರ ಸಂಘ, ಸರ್ಕಾರಿ ನೌಕರರ ಸಂಘ , ಉಳಿದಂತೆ ಚಿತ್ರರಂಗ ಬಂದ್ಗೆ ಬೆಂಬಲ ನೀಡಿತ್ತು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
