ಲಾಕ್ ಡೌನ್ ನಡುವೆಯೂ ರಸ್ತೆಯಲ್ಲಿ ಹರಿಯಿತು ರಕ್ತ; ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು:

     ಲಾಕ್​ಡೌನ್​ ನಡುವೆಯೂ ಬೆಂಗಳೂರಲ್ಲಿ ರಕ್ತ ಹರಿದಿದೆ. ರೌಡಿ ಶೀಟರ್​ ಒಬ್ಬನ ಬರ್ಬರ ಹತ್ಯೆ ನಡೆದಿದೆ. ಬುಜ್ಜು ಅಲಿಯಾಸ್ ಬುಜ್ಜಿ ಹತ್ಯೆಯಾದ ರೌಡಿ ಶೀಟರ್. ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

    ಈ ಹಿಂದೆ ರೌಡಿ ಡ್ಯಾನಿಯಲ್ ಸಂಬಂಧಿ ಸ್ಟಾಲಿನ್ ಹತ್ಯೆಯಲ್ಲಿ ಬುಜ್ಜು ಭಾಗಿಯಾಗಿದ್ದ ಎನ್ನಲಾಗಿದೆ. ಸ್ಟಾಲಿನ್ ಹತ್ಯೆ ಬಳಿಕ ಆತನ ಸಹಚರರು ಬುಜ್ಜು ಸಹೋದರ ವಿನೋದ್​​ನನ್ನು ಹತ್ಯೆಗೈದಿದ್ದರು. ಬಳಿಕ ಎರಡು ಕಡೆ ಒಂದೊಂದು ಹತ್ಯೆಯಾಗಿದೆ. ಹೀಗಾಗಿ ಇಬ್ಬರೂ ಸೈಲೆಂಟ್​ ಆಗಿರೋಣ ಎಂದು ಸಂಧಾನ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ರೌಡಿ ಶೀಟರ್ ಬುಜ್ಜು ಹತ್ಯೆಯಾಗಿದೆ. ಹಳೆಯ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

   ಈ ಅಂಶಗಳನ್ನು ಗಮನಿಸಿದರೆ ರೌಡಿ ಡ್ಯಾನಿಯಲ್ ಸಹಚರರಿಂದಲೇ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಬಗ್ಗೆ ತನಿಖೆಯ ನಂತರವಷ್ಟೇ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap