ನಿಖಿಲ್ ನಿಜಕ್ಕೂ ಕುಡಿದು ರಂಪಾಟ ಮಾಡಿದ್ದರಾ..? : ಸ್ಪಷ್ಟನೆ ನೀಡಿದ ಹೋಟೆಲ್​ನವರು

ಬೆಂಗಳೂರು :

  ನಿಖಿಲ್​ ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ವಿರುದ್ಧ 1.30 ಲಕ್ಷ ಮತಗಳ ಅಂತರದಿಂದ ಸೋತಿದ್ದಾರೆ. ಅವರು ಸೋತ ಬೇಸರದಲ್ಲಿ ಮೈಸೂರಿನ ಹೋಟೆಲ್​ ಒಂದರಲ್ಲಿ ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದು ವರದಿ ಮಾಡಿತ್ತು. ಆದರೆ ಇದೊಂದು ನಕಲಿ ಸುದ್ದಿ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

“ಚುನಾವಣೆಯಲ್ಲಿ ಸೋತ ನಂತರ ನಿಖಿಲ್​ ಮೈಸೂರಿನ ರ್ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ ತಂಗಿದ್ದರು. ಈ ವೇಳೆ ಸೋಲಿನ ಬೇಸರದಿಂದ ಜೋರಾಗಿ ಗಲಾಟೆ-ರಂಪಾಟ ಮಾಡಿದ್ದರು. ಈ ವೇಳೆ ಹೋಟೆಲ್​ ಮ್ಯಾನೇಜರ್​ ಹಾಗೂ ಸಿಬ್ಬಂದಿ ಎಷ್ಟೇ ಸಮಾಧಾನ ಪಡಿಸಿದರೂ ಅವರ ವಿರುದ್ಧವೂ ವಾಗ್ದಾಳಿ ನಡೆಸಿ ಗಲಾಟೆ ಮಾಡಿದ್ದರು.​ ಅಜ್ಜ ದೇವೇಗೌಡರ ವಿರುದ್ಧವೂ ಅವರು ಕೂಗಾಡಿದ್ದರು,” ಎಂದು ಪತ್ರಿಕೆಯೊಂದು ಸುದ್ದಿ ಪ್ರಕಟಿಸಿಲಾಗಿತ್ತು.


 ಆದರೆ ಇದೊಂದು  ಸುಳ್ಳು ಸುದ್ದಿ  “ಆ ರೀತಿ ಘಟನೆಯೇ ನಡೆದಿಲ್ಲ ಎಂದು ಹೋಟೆಲ್​ನವರೇ ಸ್ಪಷ್ಟನೆ ನೀಡಿದ್ದಾರೆ.  ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗಿದೆ,” ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಯ ವರದಿ ಸಖತ್​ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಎಡೆ ಮಾಟಿಕೊಟ್ಟಿದೆ. 

ಈ ಬಗ್ಗೆ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ,’ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ,” ಎಂದಿದ್ದಾರೆ

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap