ನವದೆಹಲಿ:
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೇರಿ ದೇಶದ ಅನೇಕ ಮುಖ್ಯಮಂತ್ರಿಗಳಿಗೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹ್ಮದ್ ಉಗ್ರ ಸಂಘಟನೆ ಜೀವ ಬೆದರಿಕೆವೊಡ್ಡಿದೆ.
ಈ ವಿಚಾರವನ್ನು ಉತ್ತರ ಪ್ರದೇಶ ಪೊಲೀಸರು ಖಚಿತಪಡಿಸಿದ್ದಾರೆ ಕೆಲ ಪತ್ರಗಳು ಉತ್ತರ ಪ್ರದೇಶ ಪೊಲೀಸರಿಗೆ ಲಭ್ಯವಾಗಿದೆ ಜೈಷ್-ಇ-ಮೊಹ್ಮದ್ ಉಗ್ರ ಸಂಘಟನೆ ಇದನ್ನು ಬರೆದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆರ್ಎಸ್ಎಸ್ ಮುಖ್ಯಮಸ್ಥ ಮೋಹನ್ ಭಾಗ್ವತ್ ಮತ್ತು ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆವೊಡ್ಡಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಉತ್ತರ ಪ್ರದೇಶದ ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಕೆಲ ರೈಲ್ವೆ ನಿಲ್ದಾಣದಲ್ಲಿ ನಾವು ಬಾಂಬ್ ಸ್ಫೋಟ ಮಾಡುತ್ತೇವೆ,” ಎಂದು ಎಚ್ಚರಿಸಲಾಗಿದೆ.
ಕಿಡಿಗೇಡಿಗಳು ಇದನ್ನು ಬರೆದಿರಬಹುದು ಎನ್ನುವ ಶಂಕೆ ಕೂಡ ಮೂಡಿದೆ. ಆದರೆ, ಇತ್ತೀಚೆಗೆ ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಹಾಗಾಗಿ, ಈ ವಿಚಾರವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/1-7.jpg)