ಹುಬ್ಬಳ್ಳಿ : ಬಿಜೆಪಿ ಮುಖಂಡರೊಬ್ಬರಿಗೆ ಕಾಂಗ್ರೆಸ್ ಸೇರುವಂತೆ ಸಚಿವ ಡಿ.ಕೆ.ಶಿವಕುಮಾರ್ ಅವರು 5 ಲಕ್ಷ ರೂ. ಆಮಿಷ ಒಡ್ಡಿದ್ದಾರೆ ಎಂದು ಸಂಸದೆ ಶೋಭಾ ಕರಂದಾಜ್ಲೆ ಅವರು ಹೇಳಿದ್ದಾರೆ.
ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಸಚಿವರು ನನಗೆ ಆಮಿಷ ಒಡ್ಡಿದ್ದಾರೆ ಎಂದು ನಮ್ಮ ಪಕ್ಷದ ಮುಖಂಡರು ನನ್ನ ಬಳಿ ಹೇಳಿಕೊಂಡಿದ್ದಾರೆ. ಆದರೆ ನಾವು ಖರೀದಿಗೆ ಇಲ್ಲ ಅಂತ ಸಚಿವರಿಗೆ ಕುಂದಗೋಳ ಕ್ಷೇತ್ರದ ಜನರು ತಿರುಗೇಟು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸಚಿವರು ಶಿವಮೊಗ್ಗಕ್ಕೆ ಹೋಗಿದ್ದರು. ಭದ್ರಾವತಿಯಲ್ಲಿ ಹಣ ಹಂಚಲು ಮುಂದಾಗಿದ್ದರು. ಆದರೆ ಕಾರಿನ ಟೈಯರ್ ನಲ್ಲಿ 2 ಕೋಟಿ ರೂ. ಸಿಕ್ಕಿಬಿತ್ತು. ಈ ಹಿಂದೆ ನಂಜನಗೂಡು ಉಪ ಚುನಾವಣೆ ಪ್ರಚಾರಕ್ಕೆ ಹೋಗಿದ್ದರು. ಆಗಲೂ ಲಾರಿಯಲ್ಲಿ ಹಣ ಸಾಗಿಸುವ ಪ್ರಯತ್ನ ಮಾಡಿ, ಸಿಕ್ಕಿಬಿದ್ದಿದ್ದರು. ಈ ಮೂಲಕ ಅಕ್ರಮವಾಗಿ ಚುನಾವಣೆ ಗೆಲ್ಲಲು ಸಚಿವರು ಮುಂದಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
