ಸಭೆಯಲ್ಲಿ ಮೂವರು ಸಚಿವರಿಗೆ ಮೋದಿ ಕ್ಲಾಸ್?

ನವದೆಹಲಿ:

      ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಮೂವರು ಮಂತ್ರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ . ಹೌದು ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ ಅಂಗಡಿಗೆ ಮೋದಿ ಬಿಸಿ ಮುಟ್ಟಿಸಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಎಚ್ಚರಿಕೆ ಕೊಟ್ಟಿದ್ದರು. ಆದರೆ ಮೋದಿಯವರ ಎಚ್ಚರಿಕೆಯನ್ನು ಮರೆತ್ತಿದ್ದ  ಈ ಮೂವರು ಸಚಿವರ  ವಿರುದ್ಧ ಮೋದಿ  ಗರಂ ಆಗಿದ್ದಾರೆ.

 

    ಪ್ರಮಾಣವಚನಕ್ಕೂ ಮೊದಲೇ ಈ ಮೂವರು `ನಮಗೆ ಸಚಿವ ಸ್ಥಾನ ಕೊಡ್ತಿದ್ದಾರೆ’ ಎಂದು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು. ಈ ವಿಚಾರ ಮೋದಿಯವರ ಗಮನಕ್ಕೆ ಬಂದಿದ್ದು, ಪ್ರಮಾಣ ವಚನದಂದೇ ನಡೆದ ಸಭೆಯಲ್ಲಿ ಮೂವರಿಗೆ ಪಾಠ ಕಳಿಸಿದ್ದಾರೆ.

   ನನ್ನ ಸಲಹೆಯನ್ನು ಯಾಕೆ ಪಾಲಿಸಿಲ್ಲ ಎಂದು ಮೂವರನ್ನೂ ಮೋದಿ ಪ್ರಶ್ನಿಸಿದ್ದಾರೆ. ಅಲ್ಲದೆ, ಕೆಲವು ಸಚಿವರಿಗೆ ದಿನಾ ಬೆಳಗ್ಗೆದ್ದು ದೇಶವನ್ನುದ್ದೇಶಿಸಿ ಮಾತಾಡುವ ಖಯಾಲಿ ಇದೆ. ಮೊದಲು ಅಧಿಕಾರ ಸ್ವೀಕರಿಸಿ, ನಿಮ್ಮ ಸಚಿವಾಲಯದ ಬಗ್ಗೆ ತಿಳಿದುಕೊಳ್ಳಿ. ಆಮೇಲೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡಿ ಎಂದು ಪ್ರಮಾಣವಚನಕ್ಕೂ ಮೊದಲು ಸಂಜೆ 5 ಗಂಟೆಗೆ ನಡೆದಿದ್ದ ಹೊಸ ಸಚಿವರ ಸಭೆಯಲ್ಲಿ ಮೋದಿ   ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap