ಮುಂಬೈ:
ನಟಿ ಶಿಲ್ಪಾಶೆಟ್ಟಿ ಪತಿ ರಾಜ್ಕುಂದ್ರಾಗೆ ಇಡಿ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇಕ್ಬಾಲ್ ಮಿರ್ಚಿಯ ಆರ್ಥಿಕ ವ್ಯವಹಾರ ಮಾಡುತ್ತಿರುವರಿಗೆ ಇಡಿ ವಿಚಾರಣೆಗೆ ಕರೆಯುತ್ತಿದ್ದು, ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್ ವಿಚಾರಣೆ ನಡೆದ ನಂತರ ಉದ್ಯಮಿ ರಾಜ್ಕುಂದ್ರಾಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ಮುಂಬೈನ ಇಡಿ ಕಚೇರಿಯಲ್ಲಿ ನವೆಂಬರ್ 4ಕ್ಕೆ ಇಡಿಯಿಂದ ರಾಜ್ಕುಂದ್ರಾ ವಿಚಾರಣೆ ನಡೆಯಲಿದ್ದು, ಇಕ್ಬಾಲ್ ಮಿರ್ಚಿಗಾಗಿ ಕೆಲಸ ಮಾಡುತ್ತಿದ್ದ ಆರೋಪಿಯೊಬ್ಬನ ಜೊತೆಗೆ ರಾಜ್ ಕುಂದ್ರಾ ವ್ಯವಹಾರ ಬೆಳೆಸಿದ್ದರ ವಿಚಾರವಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/10/shilpashetty-1568041067.jpg)