ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಸೆ. 7 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

ಮೈಸೂರು ;

  ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.  ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಿದ್ದು.

   ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯಕ್ಕೆ ಅಪಾರವಾದ ನಷ್ಟ ಉಂಟಾಗಿದೆ. ಈ ಕುರಿತು ಪರಾಮರ್ಶೆ ನಡೆಸಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ಅವರಿಗೆ   ಸಂಪೂರ್ಣ ಮಾಹಿತಿ ನೀಡಿ , ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಸಿಹಿ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap