ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಒಳಸಂಚು : ಪ್ರತಾಪ್ ಸಿಂಹ

ಮೈಸೂರು :

ಸಿದ್ದರಾಮಯ್ಯ ಅವರು ಮಂಡ್ಯ ಹಾಗೂ ಹಾಸನದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಲ್ಲು ಪ್ರೇರೆಪಿಸಿ  ಒಳಸಂಚು ನಡೆಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತುಮಕೂರಿನಲ್ಲಿ ಮುದ್ದಹನುಮೇಗೌಡರನ್ನು ಎತ್ತಿಕಟ್ಟಿರುವುದು, ಹಾಸನದಲ್ಲಿ ವಿರೋಧ ಮಾಡುತ್ತಿರುವುದು, ಹಾಗೂ ಮಂಡ್ಯದಲ್ಲಿ ಸುಮಲತಾ ಅವರನ್ನು ಅಭ್ಯರ್ಥಿ ಮಾಡಿರುವುದು ಸಿದ್ದರಾಮಯ್ಯ ಅವರ ಒಳಸಂಚು, ಇದು ಜೆಡಿಎಸ್ ನವರಿಗೂ ಗೊತ್ತಾಗಿದೆ ಎಂದು  ಆರೋಪಿಸಿದ್ದಾರೆ.

ತಮ್ಮ ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬುದು ಜನರಿಗೆ ಗೊತ್ತಾಗಿದೆ. ಆದ್ದರಿಂದಲೇ ಜನ ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಿಂದ ಬದಾಮಿಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap