ಚಿಕ್ಕಮಗಳೂರು:
ಚಿಕ್ಕಮಗಳೂರು ತಾಲೂಕಿನ ಕಳಸದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಕಳಸ ಮೂಲದ ಅಜೀಜ್(45) ಎಂದು ಗುರುತಿಸಲಾಗಿದೆ.
ಶಂಕಿತನ ಮನೆಯಲ್ಲಿ 4 ಪೆಟ್ರೋಲ್ ಬಾಂಬ್, 40 ಜಿಲೆಟಿನ್ ಕಡ್ಡಿ, ಬಾಂಬ್ ತಯಾರಿಕೆಗೆ ಬಳಸುವ ಕೆಮಿಕಲ್ ಇತ್ತು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳಸ ಪೊಲೀಸರು ಶಂಕಿತನ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಅರಣ್ಯ ಚೆಕ್ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ನಡೆದಿತ್ತು. ಚುನಾವಣೆ ಹೊತ್ತಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಹೂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/petrol-bomb-900x570.jpg)