ಹರಿಯಾಣ:
ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರಿಗೆ ವೇಗವಾಗಿ ಬಂದ ಟ್ರಕ್ ಗುದ್ದಿದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದ ಬಳಿ ನಡೆದಿದೆ.
ಶನಿವಾರ ರಾತ್ರಿ ಕಾರ್ಮಿಕರು ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ತರಕಾರಿ ತುಂಬಿದ್ದ ಟ್ರಕ್ ವೇಗವಾಗಿ ಬಂದಿದ್ದು, ನಿಯಂತ್ರಣ ಕಳೆದುಕೊಂಡ ಚಾಲಕ ಅವರಿಗೆ ಗುದ್ದಿದ್ದಾನೆ ಎಂದು ಮಾನೇಸರ್ ಡಿಸಿಪಿ ದೀಪಕ್ ಶಹ್ರಾನ್ ತಿಳಿಸಿದ್ದಾರೆ.
ಘಟನೆಯಲ್ಲಿ ಓರ್ವ ಮಹಿಳೆ, ಒಂದು ಮಗು ಸೇರಿ ಐವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/Untitled-design-2019-06-25T184911.192-copy.png)