ಸಂತ್ರಸ್ತರಿಗೆ ಅಗತ್ಯ ವಸ್ತು ಪೂರೈಕೆ ಮಾಡಲು ತಯಾರಾದ ಮಾಜಿ ಪ್ರಧಾನಿ ಮೊಮ್ಮಗ

ಬೆಂಗಳೂರು: 

    ಉತ್ತರ ಕರ್ನಾಟಕದಲ್ಲಿ ಭಾರಿ ಪ್ರವಾಹ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗೆ ಜೆಡಿಎಸ್​ ಪಕ್ಷ ಮುಂದಾಗಿದ್ದು, ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳ ರವಾನೆಗೆ ಸಿದ್ಧತೆ ಮಾಡಿಕೊಂಡಿದೆ.

50 ಸಾವಿರ ಬ್ಲಾಂಕೆಟ್ಸ್, 15 ಸಾವಿರ ಬೆಡ್​ಶೀಟ್​, ಅಕ್ಕಿ ಹಾಗೂ ಬಿಸ್ಕೆಟ್ ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಜೆಡಿಎಸ್​ ಪ್ರಧಾನ ಕಚೇರಿ ಜೆಪಿ ಭವನದಿಂದ ವಸ್ತುಗಳನ್ನು ರವಾನಿಸಲಾಗುತ್ತಿದೆ. ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಗತ್ಯ ವಸ್ತುಗಳನ್ನು ಸಂತ್ರಸ್ತರಿಗೆ ತಲುಪಿಸಲಾಗುತ್ತಿದೆ.

ಇನ್ನು ನಿಖಿಲ್ ಕುಮಾರಸ್ವಾಮಿ ಅವರು 5 ಸಾವಿರ ಸೀರೆ, 5 ಸಾವಿರ ಪಂಚೆ, ಅಗತ್ಯ ವಸ್ತುಗಳ ಜೊತೆಗೆ ತೆರಳಲು ತಯಾರಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಥ್ ನೀಡಲು ರಾಜ್ಯ ಜೆಡಿಎಸ್ ಪದಾಧಿಕಾರಿಗಳು ಭರ್ಜರಿ ತಯಾರಿಯಾಗಿದ್ದಾರೆ.

ಹುಬ್ಬಳ್ಳಿ, ನರಗುಂದ, ನವಿಲು ಗುಂದಾ, ಬೆಳಗಾವಿ, ಬಾಗಲಕೋಟೆ, ಕೂಡಲ ಸಂಗಮ, ಯಾದಗಿರಿ ಮುಂತಾದ ಪ್ರದೇಶಗಳಿಗೆ ಈ ಎಲ್ಲ ಅಗತ್ಯ ವಸ್ತುಗಳನ್ನು ರವಾನೆ ಮಾಡಲು ಯೋಜನೆ ರೂಪಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap