10 ಲಕ್ಷ ರೈತರಿಗೆ ಹೊಸ ಸಾಲ : ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ

ಬೆಂಗಳೂರು:   

     ಕೃಷಿಗಾಗಿ ಈ ವರ್ಷ ಹತ್ತು ಲಕ್ಷ ರೈತರಿಗೆ ಹೊಸದಾಗಿ ಸಾಲ ನೀಡಲು ತೀರ್ಮಾನಿಸಲಾಗಿದೆ. ಕನಿಷ್ಠ ತಲಾ 30 ಸಾವಿರ ರೂ.ಗಳಂತೆ ಸಾಲ ಒದಗಿಸುವುದು ನಮ್ಮ ಗುರಿ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದ್ದಾರೆ.

   ರಾಜ್ಯದಲ್ಲಿ 22 ಲಕ್ಷ ರೈತರು ಈಗಾಗಲೇ ಕೃಷಿ ಸಾಲ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಅವರೊಂದಿಗೆ ಇನ್ನೂ 10 ಲಕ್ಷ ರೈತರನ್ನು ಸೇರ್ಪಡೆ ಮಾಡಲಾಗುವುದು. ಒಟ್ಟಾರೆ 32 ಲಕ್ಷ ರೈತರಿಗೆ ಸಾಲ ಸೌಲಭ್ಯ ಒದಗಿಸಿದಂತಾಗುತ್ತದೆ. ಹತ್ತು ಸಾವಿರ ಕೋಟಿ ರೂ.ವರೆಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಹಕಾರ ಸಂಘಗಳಲ್ಲಿ ರೈತರ ಕೃಷಿ ಸಾಲ ಮನ್ನಾ ಪ್ರಕ್ರಿಯೆ ಮುಂದಿನ ಒಂದು ವಾರದಲ್ಲಿ ಪೂರ್ಣವಾಗಲಿದೆ. ತಾಂತ್ರಿಕ ಕಾರಣಗಳಿಂದ ಕೆಲವೆಡೆ ರೈತರಿಗೆ ಸಕಾಲಕ್ಕೆ ಸಾಲ ಮನ್ನಾ ಸೌಲಭ್ಯ ಲಭ್ಯವಾಗಿಲ್ಲ. ಆದರೆ ಅವರು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap