ಬಾಲಕೋಟ್‌ನಲ್ಲಿ ಉಗ್ರರು ಮತ್ತೆ ಸಕ್ರಿಯ

ನವದೆಹಲಿ:

   ಬಾಲಕೋಟ್‌ನಲ್ಲಿ ಮತ್ತೆ ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿಕೆ ನೀಡಿದ್ದಾರೆ  ‘ಭಯೋತ್ಪಾದಕರ ಒಳನುಸುಳುವಿಕೆಗಾಗಿ ಪಾಕಿಸ್ತಾನ ಪದೇ ಪದೇ ಕದನ ವಿರಾಮವನ್ನು ಉಲ್ಲಂಘಿಸಿದೆ. ಕದನ ವಿರಾಮ ಉಲ್ಲಂಘನೆಯನ್ನು ಹೇಗೆ ಎದುರಿಸಬೇಕೆಂದು ನಮಗೆ ತಿಳಿದಿದೆ.

  ಎದುರಾಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ನಮ್ಮ ಸೈನಿಕರು ಅರಿತಿದ್ದಾರೆ. ಕನಿಷ್ಠ 500 ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾವು ಜಾಗರೂಕರಾಗಿರುತ್ತೇವೆ ಮತ್ತು ಗರಿಷ್ಠ ಒಳನುಸುಳುವಿಕೆಯನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.

   ಈಗಾಗಲೇ ಕಾಶ್ಮೀರ ಕಣಿವೆಯಲ್ಲಿ ಅವಿತಿರುವ ಉಗ್ರರು ಮತ್ತು ಪಾಕಿಸ್ತಾನದಲ್ಲಿರುವ ಅವರ ಮುಖ್ಯಸ್ಥರ ನಡುವೆ ಸಂವಹನ ಸ್ಥಗಿತಗೊಂಡಿದೆ ಎಂದು ತಿಳಿಸಿದ ಸೇನಾ ಮುಖ್ಯಸ್ಥರು, ಜನರಿಂದ ಜನರ ಸಂಪರ್ಕ ಇನ್ನೂ ಉಳಿದಿವೆ. ಸೇನೆ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧವಾಗಿದೆ. ನಮ್ಮನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂಬ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap