ಡಿಕೆಶಿ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು

ನವದೆಹಲಿ:

   ಜಾರಿ ನಿರ್ದೇಶನಾಯದ ವಶದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಶನಿವಾರ  ಅಲ್ಲಿನ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಬೆಳಿಗ್ಗೆ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ಸಂದರ್ಭ ಡಿ.ಕೆ ಶಿವಕುಮಾರ್‌ ಅವರ ರಕ್ತದ ಒತ್ತಡದಲ್ಲಿ ಏರುಪೇರು ಕಂಡು ಬಂದಿದ್ದಲ್ಲದೆ, ಜ್ವರದಿಂದ ಬಳಲುತ್ತಿದ್ದರು. ಈಕಾರಣ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಸಲಹೆಯ ಮೇರೆಗೆ ದಾಖಲು ಮಾಡಿಕೊಳ್ಳಲಾಯಿತು .

   ಎರ್ಮಜೆನ್ಸಿ ವಾರ್ಡ್ ಗೆ ಡಿಕೆ ಶಿವಕುಮಾರ್ ಅವರನ್ನ ದಾಖಲು ಮಾಡಲಾಯಿತು. ಸುಮಾರು ಏಳು ಗಂಟೆ ಬಳಿಕ ಸಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಿದ ವೈದ್ಯರು ಕಡ್ಡಾಯವಾಗಿ ವಿಶ್ರಾಂತಿ ಪಡೆಯಲೇಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ವೈದ್ಯರ ಸಲಹೆ ಹಿನ್ನೆಲೆ ಡಿಕೆ ಶಿವಕುಮಾರ್ ಇಡಿ ಅಧಿಕಾರಿಗಳ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 11 ಗಂಟೆಯ ಬಳಿಕ ಮತ್ತೆ ವಿಚಾರಣೆ ಆರಂಭವಾಗುವ ಸಾಧ್ಯತೆಗಳಿವೆ. ಎಂದು  ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap