ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ;ವಿಡಿಯೋ ವೈರಲ್

ಮೈಸೂರು: 

    ಮಾಜಿ ಸಿಎಂ ಸಿದ್ದರಾಮಯ್ಯ ಕೋಪದಲ್ಲಿ  ಕಾಂಗ್ರೆಸ್ ಕಾರ್ಯಕರ್ತನಿಗೆ ಎಲ್ಲರೆದುರು ಕಪಾಳಮೋಕ್ಷ ಮಾಡಿದ ಘಟನೆ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಇಂದು ಸಿದ್ದರಾಮಯ್ಯ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 9 ಗಂಟೆಗೆ ಎಚ್​ಎಎಲ್​ ವಿಶೇಷ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆ ಮೈಸೂರಿನಲ್ಲಿ ಮಾತನಾಡಿದ್ದಾರೆ. ನಂತರ ಅವರಿಗೆ ಕಾರ್ಯಕರ್ತ ಮೊಬೈಲ್ ನೀಡಲು ಮುಂದಾಗಿದ್ದಾರೆ ಈ ವೇಳೆ ಕುಪಿತರಾದ ಸಿದ್ದು ನಾನು ಮಾತನಾಡುವುದಿಲ್ಲ ಹೋಗು ಎಂದು ಆತನ ಕೆನ್ನೆಗೆ ಬಾರಿಸಿದ್ದಾರೆ.

   ಕಾಂಗ್ರೆಸ್​ ಕಾರ್ಯಕರ್ತ ರವಿ ಎಂಬುವವರು ಯಾವುದೋ ವ್ಯಕ್ತಿಗೆ ಕರೆ​ ಮಾಡಿದ್ದರು. ಅದಾದ ನಂತರ ಹತ್ತಿರ ಬಂದ ಸಿದ್ದರಾಮಯ್ಯ ಅವರಿಗೆ ಮೊಬೈಲ್​ ನೀಡಲು ರವಿ ಮುಂದಾಗಿದ್ದರು. ಅಷ್ಟೇ ಅಲ್ಲ, ದೂರವಾಣಿ ಸಂಪಕರ್ಕದಲ್ಲಿರುವವರ ಜೊತೆ ಮಾತನಾಡುವಂತೆ ಕೋರಿದ್ದರು. ‘ನಾನು ಮಾತಾನಡುವುದಿಲ್ಲ ಹೋಗ್​’ ಎಂದು ಸಿದ್ದರಾಮಯ್ಯ ರವಿ ಕೆನ್ನೆಗೆ ಬಾರಿಸಿ, ಪಕ್ಕಕೆ ತಳ್ಳಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ .

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap