ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದ್ದು, ಹಂತಕರಿಬ್ಬರ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ನಂದಿನಿ ಲೇಔಟ್ನಲ್ಲಿ ನಡೆದಿದೆ.
ಚಂದನ್ ಎಬಿಸಿಡಿ ಚಂದ್ರು ಮತ್ತು ರೋಹಿತ್ ಕಾಲಿಗೆ ನಂದಿನಿ ಲೇಔಟ್ ಪೊಲೀಸರು ಗುಂಡು ಹೊಡೆದಿದ್ದಾರೆ. ಈ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಕೆ.ಡಬ್ಲೂ ಲೇಔಟ್ನಲ್ಲಿ ನಡೆದಿದೆ. ಇದೇ ತಿಂಗಳು 21 ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಮಾ ಮಾಹೇಶ್ವರ್ ಎಂಬವರನ್ನ ಕೊಲೆ ಮಾಡಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದರು.
ಆರೋಪಿಗಳ ಬಗ್ಗೆ ಖಚಿತ ಮಾಹಿತಿ ತಿಳಿದ ನಂದಿನಿ ಲೇಔಟ್ ಇನ್ಸ್ಪೆಕ್ಟರ್ ಲೋಹಿತ್ ಬಂಧಿಸಲು ಹೋಗಿದ್ದಾರೆ. ಆದರೆ ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಲೋಹಿತ್ ಆತ್ಮರಕ್ಷಣೆಗಾಗಿ ಹಂತಕರ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/674284-657825-581427-gun-afp.jpg)