ಉಡುಪಿ:
ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಎಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಬಗ್ವಾಡಿ ಸಮೀಪದ ದೇವಲ್ಕುಂದದಲ್ಲಿರುವ ಮಲ್ಪೆಫ್ರೆಶ್ ಮರೈನ್ ಎಕ್ಸ್ಪೋರ್ಟ್ ಪ್ರೈ. ಲಿ.ನ ಘಟಕದಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಕಾರ್ಮಿಕರಿಗೆ ವಾಂತಿ ಮತ್ತು ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದರು.
ತಕ್ಷಣ ತೀವ್ರವಾಗಿ ಅಸ್ವಸ್ಥರಾಗಿದ್ದ ಜನರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೀನನ್ನು ಫ್ರೀಜ್ ಮಾಡಲು ಅಮೋನಿಯಾವನ್ನು ಬಳಸಲಾಗುತ್ತದೆ. ಈ ಅನಿಲ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ಅಮೋನಿಯಾ ಅನಿಲ ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಸ್ಥಳಕ್ಕೆ ಕಂಡ್ಲೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/08/1-3.jpg)