ಉಡುಪಿ:
ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆ ಸಮೀಪದ ಅದಮಾರುನಲ್ಲಿ ಸೋಮವಾರ ಸಂಭವಿಸಿದೆ. ಪಡುಬಿದ್ರೆ ಅದಮಾರು ನಿವಾಸಿ ಕಂಚಿನಡ್ಕ ಶಾಲೆಯಲ್ಲಿ ಓದುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಸೃಜನ್ಯ (13) ಆತ್ಮಹತ್ಯೆ ಮಾಡಿಕೊಂಡವಳು.
ಮೊಬೈಲ್ ಕೊಡದಿದ್ದಕ್ಕೆ ಬೇಸರಗೊಂಡು ಬಾಲಕಿ ಆತ್ಮಹತ್ಯೆಕೊಂಡಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತಳ ತಾಯಿ ಮಾನಂಪಾಡಿ ಶಾಲೆಯಲ್ಲಿ ಟೀಚರ್ ಆಗಿದ್ದು, ತಂದೆ ಹಳೆಯಂಗಡಿ ಬೊಳ್ಳುರು ಶಾಲೆಯಲ್ಲಿ ಶಿಕ್ಷಕರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/1-1.jpg)