ಚಾಮರಾಜನಗರ :
ರಸ್ತೆಬದಿಯ ಚರಂಡಿಯ ಸಮೀಪದಲ್ಲೆ ಮಾತನಾಡುತ್ತಾ ಕುಳಿತಿದ್ದ ವೃದ್ಧರಿಬ್ಬರಿಗೆ ಕ್ರೇನ್ ರೂಪದಲ್ಲಿ ಮೃತ್ಯು ಬಂದೆರಗಿರುವ ದಾರುಣ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮ ಸಮೀಪದಲ್ಲೆ ಬುಧವಾರ ಸಂಜೆ ಜರುಗಿದೆ.
ಹಳೇ ಹಂಪಾಪುರ ಗ್ರಾಮದ ಸಿದ್ದಯ್ಯ(74) ಹಾಗೂ ಹೊಸ ಹಂಪಾಪುರ ಗ್ರಾಮದ ಲಿಂಗರಾಜು (71) ಎಂಬುವರೇ ಮೃತಪಟ್ಟದುರ್ದೈವಿಗಳು.
ಕೊಳ್ಳೇಗಾಲದಿಂದ ಮುಳ್ಳೂರಿಗೆ ಕ್ರೇನ್ ತೆರಳುವಾಗ ರಸ್ತೆಬದಿ ವೃದ್ಧರು ಕುಳಿತಿರುವುದು ಕಾಣದೇ ಚಾಲಕ ವೃದ್ಧರ ಮೇಲೆಯೇ ಕ್ರೇನ್ ಹರಿಸಿದ್ದಾನೆ. ಎದುರಿಗೆ ಬಂದ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆಯವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಚರಂಡಿಯ ಬಳಿ ಕುಳಿತಿದ್ದ ಸಿದ್ದಯ್ಯ ಹಾಗೂ ಲಿಂಗರಾಜು ಅವರ ಮೇಲೆ ಹರಿದಿದೆ ಎನ್ನಲಾಗಿದೆ.
ಚೀರಾಟ ಕಂಡು ಪರಾರಿಯಾಗುತ್ತಿದ್ದ ಚಾಲಕ ಆರ್ಮುಗಂ ಎಂಬಾತನನ್ನ ಸಾರ್ವಜನಿಕರೇ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ