ನಾಪತ್ತೆಯಾದ ಶಾಸಕ ಮುಂಬೈ ಆಸ್ಪತ್ರೆಯಲ್ಲಿ ದಾಖಲು..!!

ಬೆಂಗಳೂರು:   

   ನಿನ್ನೆ ರಾತ್ರಿ ಬೆಂಗಳೂರಿನ ದೇವನಹಳ್ಳಿ ಸಮೀಪದ ಪ್ರಕೃತಿ ರೆಸಾರ್ಟ್​ನಿಂದ  ಕಣ್ಮರೆಯಾಗಿದ್ದ ಶ್ರೀಮಂತ ಪಾಟೀಲ್ ದಿಢೀರ್ ಮುಂಬೈಗೆ ತೆರಳಿ ಅಲ್ಲಿ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿರುವ ಅಚ್ಚರಿ ಮೂಡಿಸುತ್ತಿದೆ. 

  ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಶ್ರೀಮಂತ್‌ ಪಾಟೀಲ್‌ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.   ಆಪರೇಷನ್ ಕಮಲಕ್ಕೆ ಒಳಗಾಗಿರಬಹುದು ಎಂಬ  ಕಾಂಗ್ರೆಸ್ ನಾಯಕರಿಗೆ ಆನುಮಾನ ಮೂಡಿಸಿದೆ.

   ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಅವರನ್ನು ಹೇಗಾದರೂ ಕರೆತರುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಬಹುದಾದರೂ ಮುಂಬೈನಲ್ಲಿರುವ ಶ್ರೀಮಂತ ಪಾಟೀಲ್ ಅವರನ್ನು ಕರೆಸುವುದು ಅನುಮಾನ ಎನ್ನಲಾಗುತ್ತಿದೆ.  

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap