ನವದೆಹಲಿ:
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆ ಮೇಲೆ ಮತ್ತೊಮ್ಮೆ ದಾಳಿ ನಡೆಸಿದೆ. ಈ ಮೂಲಕ ಉಗ್ರರರನ್ನು ಸದೆ ಬಡಿಯಲು ಕಠಿಣ ಕ್ರಮ ಕೈಗೊಂಡಿದೆ.
ಪಾಕ್ ಆಕ್ರಮಿತ ಕಾಶ್ಮೀರದ ನೀಲಮ್ ಕಣಿವೆಯಲ್ಲಿರುವ ನಾಲ್ಕು ಉಗ್ರರ ನೆಲೆಗಳ ಮೇಲೆ ಭಾರತ ಸೇನೆ ಭಾನುವಾರ ಶೆಲ್ ದಾಳಿ ನಡೆಸುವ ಮೂಲಕ ನಾಶ ಮಾಡಿದೆ. ಈ ವೇಳೆ ನಾಲ್ಕೈದು ಪಾಕ್ ಸೈನಿಕರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ಪಾಕಿಸ್ತಾನ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಘರ್ ಭಾಗದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಓರ್ವ ನಾಗರಿಕ ಮೃತಪಟ್ಟಿದ್ದರು. ಈ ದಾಳಿಗೆ ಭಾರತ ಸೇನೆ ಇಂದು ಸೇಡು ತೀರಿಸಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
