ಉಡುಪಿ:
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಮತದಾನದ ಹಕ್ಕಿಲ್ಲ, ಅವರದೇ ಮತ ಅವರಿಗಿಲ್ಲ ಎನ್ನುವಾಗ ಅವರ ಗೆಲುವು ಹೇಗೆ ಸಾಧ್ಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಆಭ್ಯರ್ಥಿ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ತಾಯಿ, ಪತ್ನಿ, ಅಕ್ಕನ ಜತೆ ಉಡುಪಿಯ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತದಾನ ಮಾಡಿದರು.
![](http://prajapragathi.com/wp-content/uploads/2019/04/31770435_2076996289207722_3708103308271943680_n.jpg)
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಮೈತ್ರಿ ಅಭ್ಯರ್ಥಿ ಆದಾಗ ಅಪಸ್ವರವಿತ್ತು. ಈಗ ಕಾರ್ಯಕರ್ತರಿಗೆ ಒಳ್ಳೆಯ ನಿರ್ಧಾರ ಎಂಬ ಭಾವನೆ ಬಂದಿದೆ. ಕಾರ್ಯಕರ್ತರು ನಾಯಕರಿಗೆ ಮನವರಿಕೆ ಮಾಡಲಾಗಿದೆ. ಹಿಂದಿನ ಚುನಾವಣೆಗಿಂತಲೂ ಹೆಚ್ಚಿನ ಉತ್ಸಾಹದಲ್ಲಿ ಫೀಲ್ಡ್ ವರ್ಕ್ ಆಗಿದೆ. ಎಲ್ಲಾ ಪ್ರಚಾರದಲ್ಲೂ ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದರು.
ಮೋದಿ ಹೆಸರಿನಲ್ಲಿ ಕೆಟ್ಟ ಜನಪ್ರತಿನಿಧಿ ಆಯ್ಕೆ ನಮಗೆ ನಷ್ಟ ಎಂದು ಜನರಿಗೆ ಮನವರಿಕೆಯಾಗಿದೆ. ರಾತ್ರಿ ಕಂಡ ಬಾವಿಗೆ ಹಗಲು ಬೀಳುವುದು ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ.
‘ನನ್ನ ಎದುರಾಳಿ ಶೋಭಾ ಕರಂದ್ಲಾಜೆ ಅವರಿಗೆ ಕ್ಷೇತ್ರದಲ್ಲಿ ವೋಟ್ ಮಾಡುವ ಅವಕಾಶ ಇಲ್ಲ. ಹೀಗಾಗಿ ಶೋಭಾ ಅವರಿಗೆ ತಮ್ಮದೇ ಓಟು ಬೀಳುವುದಿಲ್ಲ. ಇನ್ನು ಅವರ ಗೆಲುವು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ.
![](https://prajapragathi.com/wp-content/uploads/2019/04/31770435_2076996289207722_3708103308271943680_n.jpg)