ನಿಖಿಲ್ ಕುಮಾರಸ್ವಾಮಿ ವಿರುದ್ಧ ಮಂಡ್ಯದಲ್ಲಿ 3 ದೂರು​ ದಾಖಲು!!

ಮಂಡ್ಯ : 

  ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್​ ಸಮಾವೇಶ ನಡೆಸಿದ್ದ ಜೆಡಿಎಸ್​ ವಿರುದ್ಧ 3 ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದೆ.


 ಸಮಾವೇಶದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್​ ವಿರುದ್ಧ 3 ಪ್ರತ್ಯೇಕ ಎಫ್​ಐಆರ್​ ದಾಖಲಿಸಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದ್ದು,  ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎನ್ನಲಾಗಿದೆ. ಪ್ಲೈಯಿಂಗ್ ಸ್ಕ್ವಾಡ್ ರವಿ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ. 

ಕಾವೇರಿ ವನದಲ್ಲಿ ಹೂ ಕುಂಡಗಳು, ಹೂವಿನ ಗಿಡಗಳು, ಪೌಂಟೇನ್, ವಿದ್ಯುತ್ ಸಂಪರ್ಕಗಳು, ಲಾನ್ ತುಳಿದು ಹಾಳು ಮಾಡಲಾಗಿದೆ ಮತ್ತು  ಮಂಡ್ಯದ ಸಂಜಯ ವೃತ್ತದಲ್ಲಿ ಅನುಮತಿ ಪಡೆಯದೆ ಹಸಿರು, ಬಿಳಿ ಬಣ್ಣದ ಪೇಪರ್ ಚೂರುಗಳನ್ನು ಸಿಡಿಸಿದರಿಂದ ಮಂಡ್ಯದ ಕಾವೇರಿ ವನದ ಎದುರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆ ತನಕ ನಿಂತು ಸಂಚಾರಕ್ಕೆ ಅಡ್ಡಿ ಉಂಟು ಮಾಡಲಾಗಿದೆ ಎಂದು ಪ್ಲೈಯಿಂಗ್ ಸ್ಕ್ವಾಡ್ ಸುಧಾಮ ದೂರು ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap