ಜಮ್ಮು:
ಭಾರತೀಯ ವಾಯು ಪಡೆ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನವೂ ಭಾರತದ ಮೇಲೆ ಪ್ರತಿದಾಳಿಗೆ ಸಜ್ಜಾಗಿದ್ದು, ಭಾರತದ ಮೇಲೆ ಬಾಂಬ್ ದಾಳಿ ನಡೆಸಿ ಪರಾರಿಯಾಗಿವೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ನೌಶೆರಾ ಪ್ರದೇಶಗಳಲ್ಲಿನ ಭಾರತದ ವಾಯು ಗಡಿ ಉಲ್ಲಂಘಿಸಿ, ಪಾಕಿಸ್ತಾನ ಯುದ್ಧ ವಿಮಾನಗಳು ಒಳನುಸುಳಿದ್ದು, ಭಾರತೀಯ ಯುದ್ಧ ವಿಮಾನಗಳನ್ನು ಅವುಗಳನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
J&K: Pictures of craters formed from Pakistani bombs dropped near Indian Army post in Rajouri sector. Pic courtesy: Army sources) pic.twitter.com/bAqG1YW3AO
— ANI (@ANI) February 27, 2019
ಆದರೆ ಪಾಕ್ ವಿಮಾನಗಳು ಭಾರತದ ವಾಯು ವಲಯವನ್ನು ದಾಟಿ ವಾಪಸ್ ಹೋಗುವಾಗ ಬಾಂಬ್ ಗಳನ್ನು ಹಾಕಿವೆ. ಆದರೆ ಬಾಂಬ್ ದಾಳಿಯಿಂದ ಆಗಿರುವ ಹಾನಿಯ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ ನೌಶೆರಾ ಮತ್ತು ಪೂಂಚ್ ವಲಯದ ವಾಯುಭಾಗದಲ್ಲಿ ಪಾಕಿಸ್ತಾನದ ಜೆಟ್ಗಳು ಕಾಣಿಸಿಕೊಂಡಿವೆ. ಗಸ್ತು ತಿರುಗುತ್ತಿದ್ದ ಭಾರತೀಯ ವಾಯು ಪಡೆಯ ವಿಮಾನಗಳು ಪಾಕಿಸ್ತಾನದ ಜೆಟ್ಗಳನ್ನು ಕೆಲವೇ ನಿಮಿಷಗಳಲ್ಲಿ ಹಿಮ್ಮೆಟ್ಟಿಸಿರುವುದಾಗಿ ಮಾಹಿತಿ ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಜಮ್ಮು, ಶ್ರೀನಗರ, ಲೇಹ್ ಮತ್ತು ಪಂಜಾಬ್ನ ಪಠಾಣ್ಕೋಟ್ ವಿಮಾನ ನಿಲ್ದಾಣಗಳನ್ನು ಹೈ ಅಲರ್ಟ್ನಲ್ಲಿರುವಂತೆ ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/Pak-jets.jpg)