ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕೊರೊನಾ ವೈರಸ್ ಕಾರಣ ದೇಶದಲ್ಲಿ ಹೇರಿಕೆ ಮಾಡಿರುವ ಮೂರನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಅದು ಮುಕ್ತಾಯಗೊಳ್ಳಲು ಕೇವಲ ಐದು ದಿನಗಳು ಬಾಕಿ ಉಳಿದಿವೆ. ಈ ಕುರಿತಾಗಿ ನಿನ್ನೆ ಎಲ್ಲ ರಾಜ್ಯಗಳ ಸಿಎಂ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದುಕೊಂಡಿದ್ದರು.
ನಿನ್ನೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ಕೆಲ ರಾಜ್ಯಗಳು ಲಾಕ್ಡೌನ್ ಸಡಿಲಿಕೆ ಮಾಡುವಂತೆ ಪ್ರಾಧಾನಿಗಳಲ್ಲಿ ಮನವಿ ಮಾಡಿಕೊಂಡಿದ್ದು, ಕೇವಲ ನಿರ್ಬಂಧಿತ ವಲಯಗಳಲ್ಲಿ ಕರ್ಫ್ಯೂ ವಿಧಿಸಿ, ಉಳಿದೆಡೆ ಆರ್ಥಿಕ ಚಟುವಟಿಕೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿವೆ.
ಈ ನಿಟ್ಟಿನಲ್ಲಿ ಇಂದು ಮೋದಿಯವರು ಮಾಡುತ್ತಿರುವ ಭಾಷಣ ಮಹತ್ವದ್ದಾಗಿದ್ದು ಲಾಕ್ ಡೌನ್ ಸಡಿಲಿಕೆ ಬಗ್ಗೆ ಪ್ರಧಾನಿ ಭಾಷಣ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
