ಹಿಮಾಚಲ ಪ್ರದೇಶದ ಪ್ರವಾಹಕ್ಕೆ 22 ಬಲಿ

ನವದೆಹಲಿ :

     ಹಿಮಾಚಲಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದ ಅನೇಕ ಮನೆಗಳು ಕುಸಿದುಹೋಗಿತ್ತು. ಇದೀಗ ಹಿಮಾಚಲಪ್ರದೇಶದಲ್ಲಿ ಸಂಭವಿಸಿದ ಮಳೆಯಿಂದ 22 ಜನರು ಸಾವನ್ನಪ್ಪಿದ್ದಾರೆ. 

   ಭಾರೀ ಮಳೆಗೆ 22ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹರಿಯಾಣ, ಉತ್ತರಪ್ರದೇಶ, ಪಂಜಾಬ್, ದೆಹಲಿ,ಉತ್ತರಾಖಂಡದಲ್ಲೂ ಮಳೆಯಾಗುತ್ತಿದ್ದು, ಈಗಾಗಲೇ ಹತಿನಿ ಕುಂದ್ ಬ್ಯಾರೇಜ್​ನಿಂದ 8.14 ಲಕ್ಷ ಕ್ಯೂಸೆಕ್ಸ್​ ನೀರು ಹೊರಬಿಡಲಾಗಿದೆ. ಇದರಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು, ಸೇನಾಪಡೆಯನ್ನು ಕಳುಹಿಸುವಂತೆ ಹರಿಯಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

ಹಿಮಾಚಲಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಶಿಮ್ಲಾದಲ್ಲಿ , ಸೋಲನ್​ನಲ್ಲಿ , ಕುಲು, ಸಿರ್​ಮೌರ್, ಚಂಬಾ, ಬಿಲಾಸ್​ಪುರ್, ಲಾಹೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿನ ರಸ್ತೆಗಳಲ್ಲಿ ಗುಡ್ಡ ಕುಸಿತವಾಗಿದ್ದು, ಪ್ರವಾಸಿಗರು ಸಂಚಾರಕ್ಕೆ ಪರದಾಡುವಂತಾಗಿದೆ. ಮನಾಲಿ-ಕುಲು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕುಸಿತವಾಗಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link