ನವದೆಹಲಿ :
ಹಿಮಾಚಲಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದ ಅನೇಕ ಮನೆಗಳು ಕುಸಿದುಹೋಗಿತ್ತು. ಇದೀಗ ಹಿಮಾಚಲಪ್ರದೇಶದಲ್ಲಿ ಸಂಭವಿಸಿದ ಮಳೆಯಿಂದ 22 ಜನರು ಸಾವನ್ನಪ್ಪಿದ್ದಾರೆ.
ಭಾರೀ ಮಳೆಗೆ 22ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹರಿಯಾಣ, ಉತ್ತರಪ್ರದೇಶ, ಪಂಜಾಬ್, ದೆಹಲಿ,ಉತ್ತರಾಖಂಡದಲ್ಲೂ ಮಳೆಯಾಗುತ್ತಿದ್ದು, ಈಗಾಗಲೇ ಹತಿನಿ ಕುಂದ್ ಬ್ಯಾರೇಜ್ನಿಂದ 8.14 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದೆ. ಇದರಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು, ಸೇನಾಪಡೆಯನ್ನು ಕಳುಹಿಸುವಂತೆ ಹರಿಯಾಣ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಹಿಮಾಚಲಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಶಿಮ್ಲಾದಲ್ಲಿ , ಸೋಲನ್ನಲ್ಲಿ , ಕುಲು, ಸಿರ್ಮೌರ್, ಚಂಬಾ, ಬಿಲಾಸ್ಪುರ್, ಲಾಹೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿನ ರಸ್ತೆಗಳಲ್ಲಿ ಗುಡ್ಡ ಕುಸಿತವಾಗಿದ್ದು, ಪ್ರವಾಸಿಗರು ಸಂಚಾರಕ್ಕೆ ಪರದಾಡುವಂತಾಗಿದೆ. ಮನಾಲಿ-ಕುಲು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕುಸಿತವಾಗಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.
Himachal Pradesh: National Highway (NH) 3 between Manali and Kullu partially damaged following heavy rainfall in the state. pic.twitter.com/ksmM9bGz5M
— ANI (@ANI) August 19, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
