![](http://prajapragathi.com/wp-content/uploads/2018/10/rahul-gandhi.jpg)
ಭಾರತೀಯ ವಾಯುಪಡೆಗೆ ಟ್ವೀಟ್ ಮೂಲಕ ಶ್ಲಾಘಿಸಿರುವ ರಾಹುಲ್, ”ನಾನು ಐಎಎಫ್ನ ಪೈಲಟ್ಸ್ಗಳಿಗೆ ಸೆಲ್ಯೂಟ್ ಮಾಡುವೆ” ಎಂದು ಒಂದು ವಾಕ್ಯದಲ್ಲಿ ಬರೆದುಕೊಂಡಿದ್ದಾರೆ.
ಫೆಬ್ರವರಿ 14ರಂದು ಪುಲ್ವಾಮದಲ್ಲಿ ನಡೆದ ಭೀಕರ ದಾಳಿಯನ್ನು ಎಲ್ಲ ಪಕ್ಷಗಳು ಒಕ್ಕೊರಲಿನಿಂದ ಖಂಡಿಸಿದ್ದವು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕ್ ಗಡಿಯೊಳಗೆ ನುಗ್ಗಿ, ಉಗ್ರರ ಅಡಗುತಾಣಗಳ ನಾಶ ಮಾಡಿದೆ ಎಂದು ಹೇಳಲಾಗ್ತಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳು ಇಂದು ಗಡಿ ನಿಯಂತ್ರಣ ರೇಖೆ ಬಳಿಯ ಜೈಷ್ ಇ ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಹಲವಾರು ರಾಜಕೀಯ ನಾಯಕರು ಸಂತಸ ವ್ಯಕ್ತಪಡಿಸಿ ಸೇನೆಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
![](https://prajapragathi.com/wp-content/uploads/2018/12/rahul-gandhi.gif)