ಇಂದು ರಜನಿಯಿಂದ ಹೊಸ ರಾಜಕೀಯ ಪಕ್ಷ ಘೋಷಣೆ!!

ಚೆನ್ನೈ: 

      ಟಾಲಿವುಟ್ ಆಕ್ಟರ್, ಸೂಪರ್ ಸ್ಟಾರ್ ರಜನಿಕಾಂತ್ ಇಂದು ಹೊಸ ಪಕ್ಷ ಘೋಷಿಸಲಿದ್ದು, ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿದೆ.

      ರಜನಿ ಅವರು ಈಗಾಗಲೇ ರಜಿನಿ ಮಕ್ಕಳ್ ಮಂಡ್ರಂ ಹೆಸರಿನ ರಾಜಕೀಯ ಸಂಘಟನೆ ಸ್ಥಾಪಿಸಿದ್ದಾರೆ. ರಜನಿ ಮಕ್ಕಳ್ ಮಂದ್ರಂ(ಆರ್ ಎಂ ಎಂ) ನ ಜಿಲ್ಲಾ ಕಾರ್ಯದರ್ಶಿಗಳ ಸಭೆಯನ್ನು ಇಂದು ಕರೆದಿದ್ದಾರೆ. ಈ ಸಭೆಯಲ್ಲಿ ತಮ್ಮ ಹೊಸ ಪಕ್ಷ ಘೋಷಣೆಯ ಬಗ್ಗೆ ಚರ್ಚೆ ನಡೆಸಲಿರುವ ಅವರು, ಇಂದು ಅಧಿಕೃತವಾಗಿ ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ.

      ಮಾಜಿ ಮುಖ್ಯಮಂತ್ರಿಗಳಾದ ಜಯಲಲಿತಾ, ಕರುಣಾನಿಧಿ ನಿಧನರಾದ ನಂತರ ತಮಿಳುನಾಡು ರಾಜ್ಯದಲ್ಲಿ ಪ್ರಬಲ ನಾಯಕತ್ವ ಕೊರತೆ ಕಂಡುಬಂದಿದೆ. ಇದೇ ವೇಳೆ ರಜನಿಕಾಂತ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಹೊಸ ಪಕ್ಷದ ವಿವರಣೆ ನೀಡಲಿದ್ದಾರೆ. 

      ಎರಡು ವರ್ಷಗಳಿಂದ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತಾಗಿ ಸಿದ್ಧತೆಗಳು ನಡೆದಿವೆ. ಬಿಜೆಪಿ ಸೇರುವ ನಿರೀಕ್ಷೆ ಇತ್ತಾದರೂ, ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ರಜನಿಕಾಂತ್ ತಮಿಳುನಾಡು ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ಧರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap