ಶ್ರೀನಗರ :
ಪುಲ್ವಾಮಾ ದಾಳಿಗೆ ಕಾರು ವ್ಯವಸ್ಥೆ ಮಾಡಿಕೊಟ್ಟಿದ್ದ ಜೈನ್ ಎ ಮೊಹಮ್ಮದ್ ಸಂಘಟನೆಯ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಇಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಉಗ್ರರು ಮತ್ತು ಸೇನಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಸೈನಿಕರು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.
ಮೃತರಲ್ಲಿ ಒಬ್ಬನನ್ನು ಸಜ್ಜದ್ ಮಖ್ಬಾಲ್ ಭಟ್ ಹಾಗೂ ಮತ್ತೊಬ್ಬನನ್ನು ಆತ್ಮಾಹುತಿ ಬಾಂಬ್ ದಾಳಿಕೋರ ತವಸೀಫ್ ಭಟ್ ಎಂದು ಮೂಲಗಳು ತಿಳಿಸಿವೆ.
ಕಳೆದ ಫೆಬ್ರವರಿಯಲ್ಲಿ ಸಿಆರ್ಪಿಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿಕೋರ ಬಾಂಬ್ ದಾಳಿ ನಡೆಸಲು ವಾಹನದ ವ್ಯವಸ್ಥೆ ಮಾಡಿಕೊಟ್ಟವನು ಸಜ್ಜದ್ ಮಖ್ಬಾಲ್ ಭಟ್ ಎಂದು ತಿಳಿದುಬಂದಿದ್ದು, ದಾಳಿಯಲ್ಲಿ ಈತನ ಕಾರನ್ನೇ ಬಳಕೆ ಮಾಡಲಾಗಿತ್ತು ಎನ್ನಲಾಗಿದೆ.
