SC-ST ಬಡ್ತಿ ಮೀಸಲಾತಿ ಕಾಯ್ದೆಗೆ ಅಸ್ತು ಎಂದ ಸುಪ್ರೀಂ!

ನವದೆಹಲಿ :

     ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎಸ್ ಸಿ, ಎಸ್ ಟಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

      ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸರ್ಕಾರಿ ಸೇವೆಯಲ್ಲಿರುವ ಎಸ್ ಸಿ,ಎಸ್ ಟಿ ಅಧಿಕಾರಿಗಳಿಗೆ ಮಿಸಲಾತಿ ಆಧಾರದಲ್ಲಿ ಬಡ್ತಿ ನೀಡಬೇಕು ಎಂಬ ಹೊಸ ಕಾಯ್ದೆಯನ್ನು ಹೊರಡಿಸಿದ್ದರು. ಆದರೆ, ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಬಿ.ಕೆ.ಪವಿತ್ರ ಎಂಬುವವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

      ಇಂದು ಬಡ್ತಿ ಮೀಸಲಾತಿ ಕುರಿತು ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.  ಕೆನೆ ಪದರದ ತತ್ವ ಈ ಕಾಯ್ದೆಯ ಜಾರಿಯಲ್ಲಿ ಅನ್ವಯವಾಗದು. ತತ್ಪರಿಣಾಮದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆ ಆಗಿರುವುದರಿಂದ ಕೇವಲ ಉನ್ನತ ಮಟ್ಟದ ಅಧಿಕಾರಿಗಳು ಇದರ ಲಾಭ ಪಡೆಯುವುದರಿಂದ ಕಾಯ್ದೆಯನ್ನು ಮಾನ್ಯ ಮಾಡಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಪರಿಣಾಮ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿ.ಕೆ.ಪವಿತ್ರ ಅವರಿಗೆ ಹಿನ್ನಡೆಯಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link