ನವದೆಹಲಿ :
ಇಂದು ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂ ನೀಡಿರುವ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಗೌಪ್ಯ ವಿಚಾರಣೆ ನಡೆಯಲಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಎ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡಂತೆ ಇಂದು ನ್ಯಾಯಮೂರ್ತಿಗಳ ಕಚೇರಿ ಒಳಗೆ ಗೌಪ್ಯವಾಗಿ ವಿಚಾರಣೆ ನಡೆಯಲಿದೆ.
ಹಿಂದಿನ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪಂಚ ಸದಸ್ಯ ಸಂವಿಧಾನ ಪೀಠವು ವಿವಾದಿತ 2.77 ಎಕರೆ ಜಾಗವು ರಾಮಲಲ್ಲಾಗೆ ಸೇರಿದ್ದೆಂದು ನವೆಂಬರ್ 9ರಂದು ಐತಿಹಾಸಿಕ ತೀರ್ಪು ನೀಡಿತ್ತು. ಅಲ್ಲದೇ ಮಸೀದಿ ನಿರ್ಮಾಣಕ್ಕೆ ಸುನ್ನಿ ವಕ್ಫ್ ಮಂಡಳಿಗೆ ಅಯೋಧ್ಯೆ ಹೊರಭಾಗದಲ್ಲಿ 5 ಎಕರೆ ಭೂಮಿ ನೀಡುವಂತೆ ಕೇಂದ್ರಕ್ಕೆ ನಿರ್ದೇಶಿಸಿತ್ತು.
ಈ ತೀರ್ಪು ಮರುಪರಿಶೀಲಿಸುವಂತೆ ಮುಸ್ಲಿಂ ಸಂಘಟನೆಗಳು ಮತ್ತು ಹಿಂದೂ ಮಹಾಸಭಾದಿಂದ ಆರು ಮೇಲ್ಮನವಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ಗೌಪ್ಯ ವಿಚಾರಣೆ ನಡೆಸಲು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/11/ayodhya.gif)