ಹೈವೇಯಿಂದ ಜಾರಿದ ಕಾರು ; ಕೂದಲೆಳೆ ಅಂತರದಲ್ಲಿ ರಾಜ್ಯಪಾಲರು ಪಾರು!!

ಹೈದ್ರಾಬಾದ್ : 

      ಕಾರು ಚಾಲಕನು ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ರಾಜ್ಯಪಾಲ ಬಂಡಾರು ದತ್ತಾತ್ರೇಯ ಪಾರಾಗಿದ್ದಾರೆ.

     ಹಿಮಾಚಲ ಪ್ರದೇಶ ರಾಜ್ಯಪಾಲರು ಹೈದರಾಬಾದ್ ನಿಂದ ನಲ್ಗೊಂಡಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನು ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡ ಪರಿಣಾಮ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿಯಾಗಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿಯ ಚೌತುಪ್ಪಲ್ ಮಂಡಲದ ಕೈತಪುರಂ ಬಳಿ ಅಪಘಾತ ಸಂಭವಿಸಿದೆ.

      ರಾಜ್ಯ ಸರ್ಕಾರ ಒದಗಿಸಿದ ವಾಹನ ಸುಸ್ಥಿತಿಯಲ್ಲಿರಲಿಲ್ಲ ಎಂದು ನಾಗೇಶ್ ಹೇಳಿದರು. ಹೈದರಾಬಾದ್ ಮೂಲದವರಾದ ರಾಜ್ಯಪಾಲ ಬಂಡಾರು ದತ್ತಾತ್ರೇಯ ನಲ್ಗೊಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳುತ್ತಿದ್ದರು.

      ಅಪಘಾತದಿಂದ ಕಾರು ಜಖಂ ಆಗಿದ್ದು, ಆ ಘಟನಾ ಬಳಿಕ ರಾಜ್ಯಪಾಲರು ಮತ್ತೊಂದು ವಾಹನದಲ್ಲಿ ನಲ್ಗೊಂಡಕ್ಕೆ ತೆರಳಿದ್ದಾರೆ ಎಂದು ರಾಜ್ಯಪಾಲರ ಸಹಾಯಕ ಕೈಲಾಶ್ ನಾಗೇಶ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap