ಸಮ್ಮಿಶ್ರ ಸರ್ಕಾರ ಸುಭದ್ರ ; ಮಾಧ್ಯಮದವರಿಗೆ ಮಾತ್ರ ಅಭದ್ರ : ಸಿದ್ದು

ಬಾಗಲಕೋಟ: 

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಆದರೆ ಮಾಧ್ಯಮದ ಪ್ರಕಾರ ಮಾತ್ರ ಅಭದ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರನ್ನು ಟೀಕಿಸಿದ್ದಾರೆ.

      ಬಾದಾಮಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 3 ನಂತರ ಸಂಪುಟ ವಿಸ್ತರಣೆ ಆಗಲಿದ್ದು, ಸಚಿವ ಸ್ಥಾನಕ್ಕಾಗಿ ಬಹಳ ಜನ ಆಕಾಂಕ್ಷಿಗಳಿದ್ದಾರೆ. 6 ಸ್ಥಾನಗಳನ್ನು ಏಕಕಾಲಕ್ಕೆ ಭರ್ತಿ ಮಾಡುತ್ತೇವೆ. ಈ ಪೈಕಿ ಕಾಂಗ್ರೆಸ್ ಪಕ್ಷದ 6 ಮಂದಿ ಹಾಗೂ ಜೆಡಿಎಸ್‌ನ ಒಬ್ಬರನ್ನು ಸಚಿವರನ್ನಾಗಿ ಮಾಡುತ್ತೇವೆ. ಹಾಗೂ ಇಪ್ಪತ್ತು ಜನ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು. ಎಂದು ಅವರು ಮಾಹಿತಿ ನೀಡಿದರು. 

               ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap