ಶಬರಿಮಲೆ ತೀರ್ಪು : ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ!!

ನವದೆಹಲಿ:

      ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಮಹತ್ವದ ತೀರ್ಪನ್ನು 7 ಜನರ ವಿಸ್ತ್ರತ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ತೀರ್ಪು ಪ್ರಕಟಿಸಿದೆ.

      ಕೇರಳದ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಯ ತೀರ್ಪು ಇಂದು(ನ.14) ಪ್ರಕಟವಾಗಿದ್ದು, ನ್ಯಾ. ರಂಜನ್ ಗೊಗೋಯ್ ತೀರ್ಪನ್ನು ಓದಿದ್ದಾರೆ.

       ಧರ್ಮದಲ್ಲಿ ಗಂಡು-ಹೆಣ್ಣು ಇಬ್ಬರೂ ಒಂದೆ ಎಂದು ಹೇಳಿದ ಸುಪ್ರೀಂಕೋರ್ಟ್​, ಎಲ್ಲ ಧಾರ್ಮಿಕ ಕ್ಷೇತ್ರಗಳ ಪ್ರವೇಶದ ಹಕ್ಕು ಎಲ್ಲರಿಗೂ ಇದೆ. ದೇವಸ್ಥಾನ, ಮಸೀದಿ, ಚರ್ಚ್​ಗಳಿಗೆ ಪ್ರವೇಶಿಸಲು ಎಲ್ಲರಿಗೂ ಅವಕಾಶವಿದೆ ಎಂದು ತಿಳಿಸಿ ಶಬರಿಮಲೆ ಪ್ರಕರಣವನ್ನು 7 ಜನರ ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದ ವರ್ಗಾಯಿಸಿದೆ.

      ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿಗಳಾದ ಆರ್‌.ಎಫ್. ನಾರಿಮನ್, ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್, ಇಂದೂ ಮಲ್ಹೋತ್ರಾ ಅವರಿದ್ದ ಪೀಠ ವಿಸ್ತ್ರತ ಪೀಠಕ್ಕೆ ಅರ್ಜಿ ವರ್ಗಾವಣೆ ಮಾಡಿದೆ.

      2018 ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಒಟ್ಟು 56 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅವೆಲ್ಲವುಗಳ ವಿಚಾರಣೆಯನ್ನು ಕೋರ್ಟು ಮುಗಿಸಿದ್ದು, ಇಂದು ತೀರ್ಪು ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap