‘ಸುಶಾಂತ್ ಪ್ರಕರಣ ಸಿಬಿಐ ತನಿಖೆಗೆ’-ಸುಪ್ರೀಂ ಮಹತ್ವದ ತೀರ್ಪು!!

ನವದೆಹಲಿ :

     ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

      ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಪಾಟ್ನಾದಲ್ಲಿ ದಾಖಲಾಗಿರುವ FIR ಅನ್ನು ಮುಂಬೈಗೆ ವರ್ಗಾಯಿಸಿಲು ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಜೊತೆಗೆ ಬಿಹಾರ ಪೊಲೀಸರ ಎಫ್‌ಐಆರ್‌ ಸಂಪೂರ್ಣವಾಗಿ ಕಾನೂನುಬಾಹಿರವಾಗಿದ್ದು , ಈ ಪ್ರಕರಣ ಅವರ ವ್ಯಾಪ್ತಿಗೆ ಬರುವುದಿಲ್ಲ. ಅಲ್ಲದೆ , ಸಿಬಿಐ ತನಿಖೆಗೆ ಶಿಫಾರಸು ಮಾಡುವ ಅಧಿಕಾರವೂ ಅವರಿಗಿಲ್ಲ ಎಂದು ವಾದ ಮಂಡಿಸಿದ್ದರು.

     ಪ್ರಕರಣದ ವಿಚಾರಣೆಯನ್ನು ಪಟನಾದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಪಿಟಿಷನ್ ನಲ್ಲಿ ಇದ್ದ ಅಂಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್​, ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸುವ ಎಲ್ಲ ಅಧಿಕಾರವೂ ಬಿಹಾರ ಸರ್ಕಾರಕ್ಕೆ ಇದೆ. ತನಿಖೆಯ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಸಹಕಾರ ನೀಡಬೇಕು ಎಂದು ಆದೇಶಿಸಿದೆ.

    ಈ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದವರಿಗೆ ಭಾರಿ ಹಿನ್ನಡೆಯಾಗಿದೆ. ಸಿಬಿಐ ತನಿಖೆಯನ್ನು ಆಗ್ರಹಿಸುತ್ತ ಬಂದಿದ್ದ ಸುಶಾಂತ್ ಕುಟುಂಬದವರ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link