ಉಗ್ರರಿಗೆ ಆಶ್ರಯ ನೀಡಿದ್ದ ದೇವೀಂದರ್ ಸಿಂಗ್ ಶೌರ್ಯ ಪದಕ ವಾಪಸ್!!!

ಶ್ರೀನಗರ :

      ಉಗ್ರರಿಗೆ ತನ್ನ ನಿವಾಸದಲ್ಲಿ ಆಶ್ರಯ ನೀಡಿದ್ದ ಡಿವೈಎಸ್ ಪಿ.ದೇವೇಂದ್ರ ಸಿಂಗ್ ಗೆ ನೀಡಲಾಗಿದ್ದ ಶೇರ್ ಎ ಕಾಶ್ಮೀರ್ ಪೊಲೀಸ್ ಶೌರ್ಯ ಪದಕವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಾಪಸ್ ಪಡೆದಿದೆ.

     ದೇವಿಂದರ್ ಸಿಂಗ್ ಅವರಿಗೆ 2018 ರಲ್ಲಿ ಪೊಲೀಸ್ ಶೌರ್ಯ ಪದಕವನ್ನು ನೀಡಿ ಗೌರವಿಸಲಾಗಿತ್ತು. ನಂಬಿಕೆ ದ್ರೋಹ ಮತ್ತು ಪೊಲೀಸ್ ಪಡೆಗೆ ಅಪಖ್ಯಾತಿ ತಂದಿರುವ ಹಿನ್ನೆಲೆಯಲ್ಲಿ ಅವರ ಶೌರ್ಯ ಪದಕವನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

      ತಮ್ಮ ಮನೆಯಲ್ಲಿ ಉಗ್ರರಿಗೆ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್‌ ಪೊಲೀಸ್‌ ದೇವೇಂದ್ರ ಸಿಂಗ್ ಅವರನ್ನು ಅಮಾನತು ಮಾಡಲಾಗಿತ್ತು. ಇದರ ಬೆನ್ನಲ್ಲೇ ದವೀಂದರ್ ಸಿಂಗ್ ಅವರಿಗೆ ನೀಡಲಾಗಿದ್ದ ಶೇರ್-ಇ-ಕಾಶ್ಮೀರ್ ಪೊಲೀಸ್ ಪದಕವನ್ನು ಹಿಂಪಡೆಯಲಾಗಿದೆ. ಭಯೋತ್ಪಾದಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಿರುವವರಿಗೆ ರಾಷ್ಟ್ರಪತಿ ಪದಕ ಅಥವಾ ಶೌರ್ಯ ಪ್ರಶಸ್ತಿಯನ್ನು ನೀಡುವಂತಿಲ್ಲ. ಹೀಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಮ್ಮು ಆಡಳಿತ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link