ಚಿಕ್ಕಮಗಳೂರು:
ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕಂಚಿಗೂರು ಗ್ರಾಮದಲ್ಲಿ ನಡೆದಿದೆ.
ಬಸಪ್ಪ(63) ಕೊಲೆಗೈದ ನಿವೃತ್ತ ಶಿಕ್ಷಕ. ಜಯಮ್ಮ(53) ಪತಿಯಿಂದಲೇ ಕೊಲೆಯಾದ ಮಹಿಳೆ . ಹಲವು ವರ್ಷಗಳಿಂದ ದಂಪತಿ ನಡುವೆ ವೈಮನಸಿತ್ತು. ಆದರೂ ಹೇಗೋ ಇಬ್ಬರು ಮನಸ್ತಾಪದ ನಡುವೆಯೂ ಜೀವನ ಸಾಗಿಸುತ್ತಿದ್ದರು.
ಸೋಮವಾರ ಬಸಪ್ಪ ಹಾಗೂ ಆತನ ಪತ್ನಿ ಜಯಮ್ಮನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾರೆ. ಯಾವಾಗಲು ಇವರಿಬ್ಬರ ನಡುವೆ ಜಗಳವಾಗುತ್ತಲೇ ಇದರಿಂದ ಬಸಪ್ಪ ಬೇಸತ್ತು ಹೋಗಿದ್ದನು.
ಈ ವೇಳೆ ಕೋಪಗೊಂಡ ಬಸಪ್ಪ ಇದಕ್ಕೆಲ್ಲ ಒಂದು ಅಂತ್ಯ ಹಾಡಬೇಕೆಂದು ಪಿಸ್ತೂಲಿನಿಂದ ಗುಂಡು ಹಾರಿಸಿ ಪತ್ನಿಯನ್ನು ಕೊಂದು ಹಾಕಿದ್ದಾನೆ. ಅಷ್ಟೇ ಅಲ್ಲದೆ ತಾನೇ ಪತ್ನಿಯನ್ನು ಕೊಲೆ ಮಾಡಿದ್ದು ಅಂತ ಪೋಲೀಸ್ ಠಾಣೆಗೆ ಶರಣಾಗಿದ್ದಾನೆ ಈ ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/gun-shooting-firing-600032470.jpg)