ಕಿಶ್ತ್ವಾರ್:
ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರೆಸ್ಸೆಸ್ ಮುಖಂಡರೊಬ್ಬರ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಜಮ್ಮು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಶಂಕಿತ ಉಗ್ರರು ಆರ್ಎಸ್ಎಸ್ ನಾಯಕ ಆರ್ಎಸ್ಎಸ್ ನಾಯಕ ಚಂದ್ರಕಾಂತ್ ಶರ್ಮಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೆಸ್ಸೆಸ್ ಮುಖಂಡರ ರಕ್ಷಣೆಗೆಂದು ಬಂದ ಅವರ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈಯ್ಯಕಾಗಿದೆ.
ಘಟನೆಯಲ್ಲಿ ಶರ್ಮಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಆಸ್ಪತ್ರೆಯಲ್ಲಿ ಮೆಡಿಕಲ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗುಂತಕನೊಬ್ಬ ಗನ್ ಹಿಡಿದುಕೊಂಡು ಆಸ್ಪತ್ರೆಗೆ ನುಗ್ಗಿ ಶರ್ಮಾ ಹಾಗೂ ಅವರ ಗಾರ್ಡ್ ಮೇಲೆ ಗುಂಡು ಹಾರಿಸಿದ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ದಾಳಿ ನಡೆಸಿದವರ ಪತ್ತೆಗಾಗಿ ರಕ್ಷಣಾ ಪಡೆ ಶೋಧ ಕಾರ್ಯ ಆರಂಭಿಸಿದ್ದು, ಪ್ರಸ್ತುತ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/mirror-Image-graphic1-720x3.gif)