ಉಗ್ರರಿಂದ RSS ಮುಖಂಡನ ಮೇಲೆ ದಾಳಿ!!

ಕಿಶ್ತ್‌ವಾರ್:

     ಜಮ್ಮು ಮತ್ತು ಕಾಶ್ಮೀರದಲ್ಲಿ ವೈದ್ಯಕೀಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರೆಸ್ಸೆಸ್ ಮುಖಂಡರೊಬ್ಬರ ಮೇಲೆ ಉಗ್ರರು ದಾಳಿ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

      ಜಮ್ಮು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಶಂಕಿತ ಉಗ್ರರು ಆರ್‌ಎಸ್‌ಎಸ್ ನಾಯಕ ಆರ್​ಎಸ್​ಎಸ್​​ ನಾಯಕ ಚಂದ್ರಕಾಂತ್​ ಶರ್ಮಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೆಸ್ಸೆಸ್ ಮುಖಂಡರ ರಕ್ಷಣೆಗೆಂದು ಬಂದ ಅವರ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈಯ್ಯಕಾಗಿದೆ. 

      ಘಟನೆಯಲ್ಲಿ ಶರ್ಮಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಆಸ್ಪತ್ರೆಯಲ್ಲಿ ಮೆಡಿಕಲ್​ ಅಸಿಸ್ಟೆಂಟ್​ ಆಗಿ ಕೆಲಸ ಮಾಡುತ್ತಿದ್ದಾರೆ. ಆಗುಂತಕನೊಬ್ಬ ಗನ್​ ಹಿಡಿದುಕೊಂಡು ಆಸ್ಪತ್ರೆಗೆ ನುಗ್ಗಿ ಶರ್ಮಾ ಹಾಗೂ ಅವರ ಗಾರ್ಡ್​ ಮೇಲೆ ಗುಂಡು ಹಾರಿಸಿದ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

      ದಾಳಿ ನಡೆಸಿದವರ ಪತ್ತೆಗಾಗಿ ರಕ್ಷಣಾ ಪಡೆ ಶೋಧ ಕಾರ್ಯ ಆರಂಭಿಸಿದ್ದು, ಪ್ರಸ್ತುತ ಪ್ರದೇಶದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap