ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಯೊಂದರ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರಿಕರು ಹಾಗೂ ಒಬ್ಬ ಯೋಧನಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಶೈರ್ಬಾಘ್ ಪೊಲೀಸ್ ಠಾಣೆ ಬಳಿ ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಿಣಾಮ ಸ್ಥಳದಲ್ಲಿದ್ದ ನಾಲ್ವರು ನಾಗರಿಕರು ಹಾಗೂ ಒಬ್ಬ ಯೋಧನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡಿರುವ ನಾಗರಿಕರು ಹಾಗೂ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭಯೋತ್ಪಾದಕರು ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಪಡೆಗಳು, ಕಾರ್ಯಾಚರಣೆ ಆರಂಭಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
