ನಟನ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ : ಅಭಿಮಾನಿಗಳ ಸಾವು!!

ಚಿತ್ತೂರು (ಆಂಧ್ರ ಪ್ರದೇಶ): 

      ನೆಚ್ಚಿನ ನಟನ ಜನ್ಮದಿನ ಆಚರಿಸಲು ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ ಆಗಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

     ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸೋಮಶೇಖರ್ (30), ಆತನ ಸಹೋದರ ರಾಜೇಂದ್ರ (32) ಮತ್ತು ಗೆಳೆಯ ಅರುಣಾಚಲಂ (28 ವ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

     ನಟ, ರಾಜಕಾರಣಿ ಪವನ್ ಕಲ್ಯಾಣ್ ಹುಟ್ಟುಹಬ್ಬ ಪ್ರಯುಕ್ತ ಇವರುಗಳು ನಟನ ಹೆಸರಿನಲ್ಲಿ ಬ್ಯಾನರ್ ಅಳವಡಿಸುತ್ತಿದ್ದರು. ಈ ವೇಳೆ ಅಕಸ್ಮಾತ್ ಅಗಿ ಬ್ಯಾನರ್ ವಿದ್ಯುತ್ ತಂತಿಗೆ ತಗುಲಿದ್ದು, ದುರ್ಘಟನೆ ಸಂಭವಿಸಿದೆ.

     ಘಟನೆಯ ಕುರಿತು ಪವನ್ ಕಲ್ಯಾಣ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಮ್ಮ ಜನ ಸೇನಾ ಪಕ್ಷದಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪ್ರಕಟಿಸಿದ್ದಾರೆ.

     ಚಿತ್ರನಟರು ಎಂದರೆ ಅಭಿಮಾನಕ್ಕಿಂತಲೂ ಅಂಧಾಭಿಮಾನ ಹೊಂದಿರುವವರೇ ಹೆಚ್ಚು. ತಮ್ಮ ನೆಚ್ಚಿನ ನಟ-ನಟಿಯರಿಗಾಗಿ ಏನು ಮಾಡಲೂ ಸಿದ್ಧ ಎಂದುಕೊಳ್ಳುವವರು ಎಲ್ಲೆಡೆ ಕಾಣಸಿಗುತ್ತಾರೆ. ಆದರೆ ಇದೇ ಅಭಿಮಾನ ಮೂವರು ಅಭಿಮಾನಿಗಳ ಜೀವ ತೆಗೆದಿರುವ ಘಟನೆ ಬೇಸರವುಂಟುಮಾಡುವಂತದ್ದು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap