ತುಮಕೂರು:
ತುಮಕೂರು ನಗರ ಪಾಲಿಕೆಯ 22ನೇ ವಾರ್ಡಿಗೆ ಮೇ.29ರಂದು ಉಪ ಚುನಾವಣೆ ನಡೆದಿದ್ದು, ಮತ್ತೊಮ್ಮೆ ಜೆಡಿಎಸ್ ಗೆಲುವು ಸಾಧಿಸಿದೆ.
ಈ ವಾರ್ಡ್ ಪ್ರತಿನಿಧಿಸುತ್ತಿದ್ದ ಜೆಡಿಎಸ್ನ ರವಿಕುಮಾರ್ ನಿಧನರಾದ ಕಾರಣ ತೆರವಾದ ಸ್ಥಾನಕ್ಕೆ ಎಂಟು ತಿಂಗಳ ತರುವಾಯ ಮತ್ತೊಂದು ಚುನಾವಣೆ ನಡೆದಿದ್ದು, ಬಿಜೆಪಿಯ ಅಭ್ಯರ್ಥಿ ಸಂದೀಪ್ ಗೌಡಗಿಂತ 125 ಹೆಚ್ಚು ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ನ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಗೆಲುವು ಸಾಧಿಸಿದ್ದಾರೆ.
ಸಾಮಾನ್ಯ ವರ್ಗಕ್ಕೆ ಮೀಸಲಾದ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ಸೇರಿ ಏಳು ಸ್ಪರ್ಧಿಗಳು ಕಣದಲ್ಲಿದ್ದರು.
22ನೇ ವಾರ್ಡನ್ನು ಜೆಡಿಎಸ್ಗೇ ಉಳಿಸಿಕೊಳ್ಳಬೇಕು ಎಂದು ಸಚಿವ ಎಸ್ ಆರ್ ಶ್ರೀನಿವಾಸ್ ಪ್ರಯತ್ನ ನಡೆಸಿದ್ದಾರೆ. ಹಲವರು ಟಿಕೆಟ್ ಆಕಾಂಕ್ಷಿಗಳಿದ್ದರೂ ತಮ್ಮ ಬೆಂಬಲಿಗ ಶ್ರೀನಿವಾಸಮೂರ್ತಿಯವರಿಗೆ ಸ್ಪರ್ಧಿಸಲು ಅವಕಾಶ ಕೊಟ್ಟು ಪ್ರಚಾರ ನಡೆಸಿ, ಗೆಲುವಿಗೆ ತಂತ್ರ ರೂಪಿಸಿದ್ದರು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/05/tumkur-palike.gif)